ಕಾರ್ಕಳಹೆಬ್ರಿ

ಹೆಬ್ರಿ ಅಮೃತ ಭಾರತಿ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ

ಹೆಬ್ರಿ : ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿಯನ್ನು ಆಚರಿಸಲಾಯಿತು.


ಸಂಸ್ಥೆಯ ಮುಖ್ಯಸ್ಥರು ಗಾಂಧಿ ಹಾಗೂ ಶಾಸ್ತ್ರೀಯವರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಿದರು. ವಿದ್ಯಾರ್ಥಿಗಳಾದ ಸೃಷ್ಟಿ ಕೆ ಪೂಜಾರಿ, ಸೃಷ್ಟಿ ಎಚ್‌ಎಸ್, ಸಿಂಚನ ದೇವಾಡಿಗ, ಅನ್ನಪೂರ್ಣ ಅವರು ಗಾಂಧಿ ಹಾಗೂ ಶಾಸ್ತ್ರೀಯವರ ಜೀವನ ಗಾಥೆಯ ಕುರಿತು ಮಾತನಾಡಿದರು.

ಕಾಲೇಜಿನ ಪ್ರಾಂಶುಪಾಲ ಅಮರೇಶ ಹೆಗ್ಡೆ, ಸಿಬಿಎಸ್‌ಸಿ ವಿಭಾಗದ ಪ್ರಾಂಶುಪಾಲ ಅರುಣ್ ಹೆಚ್ ವೈ, ಮುಖ್ಯ ಶಿಕ್ಷಕರಾದ ಅನಿತಾ, ಅಪರ್ಣಾ ಆಚಾರ್, ಶಕುಂತಲಾ, ಸಾರ್ವಜನಿಕ ಸಂಪರ್ಕ ಅಧಿಕಾರಿ ವಿಜಯ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.


ವಿದ್ಯಾರ್ಥಿಗಳಿಂದ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಉಪನ್ಯಾಸಕ ಸುಹಾಸ್ ನಿರೂಪಿಸಿ ವಂದಿಸಿದರು.

Related posts

114 ವರ್ಷಗಳ ಇತಿಹಾಸ ಹೊಂದಿರುವ ಎಂಸಿಸಿ ಬ್ಯಾಂಕಿನಿಂದ 1,535 ಕೋಟಿ ರೂಪಾಯಿ ವ್ಯವಹಾರ ; 22 ನೇ ಶಾಖೆ ದೇರಳಕಟ್ಟೆ ಮತ್ತು 23ನೇ ಶಾಖೆ ಕಟಪಾಡಿಯಲ್ಲಿ ಉದ್ಘಾಟನೆ

Madhyama Bimba

ಕೌಡೂರು ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ಹರಕೆ ಮಾರಿಪೂಜೆ

Madhyama Bimba

ಟೇಕ್ವಾಂಡೊದಲ್ಲಿ ಸತ್ಯಪ್ರಸಾದ್‌ಗೆ ಚಿನ್ನದ ಪದಕ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More