ಕಾರ್ಕಳಹೆಬ್ರಿ

ಶಾಲಾ ಬಸ್ಸಿನ ಚಾಲಕನಿಗೆ ಹಲ್ಲೆ: ಪ್ರಕರಣ ದಾಖಲು

ಕಾರ್ಕಳ: ವಿರುದ್ಧ ದಿಕ್ಕಿನಿಂದ ಮೋಟಾರ್ ಸೈಕಲನ್ನು ಚಲಾಯಿಸಿಕೊಂಡು ಬಂದು ಶಾಲಾ ಬಸ್ಸನ್ನು ಅಡ್ಡ ಹಾಕಿ ಅದರ ಚಾಲಕನನ್ನು ಬಸ್ಸಿನಿಂದ ಎಳೆದು ಹಾಕಿ ಹಲ್ಲೆ ನಡೆದ ಘಟನೆ ಅ. 4ರಂದು ನಡೆದಿದೆ.


ಕಾರ್ಕಳ ಶ್ರೀಭುವನೇಂದ್ರ ರೆಸಿಡೆನ್ಸಿಯಲ್ ಸ್ಕೂಲ್‌ನಿಂದ ಮಕ್ಕಳನ್ನು ಕರೆದುಕೊಂದು ಕಾರ್ಕಳ ತಾಲೂಕಿನ ಕಸಬಾ ಗ್ರಾಮದ ಆನೆಕೆರೆ ಭವಾನಿ ಮಿಲ್‌ನ ಹತ್ತಿರ ಪಾಯಸ್ ಗ್ಯಾರೇಜ್ ಎದುರಿಗೆ ಹೋಗುತ್ತಿರುವಾಗ ಅಪರಿಚಿತ ವ್ಯಕ್ತಿ ಬಸ್ಸಿನ ಚಾಲಕನನಿಗೆ ಹೆಲ್ಮೆಟ್‌ನಿಂದ ಹೊಡೆದು ತಲೆಗೆ ಗಾಯಗೊಳಿಸಿ ಅವಾಚ್ಯ ಶಬ್ದಗಳಿಂದ ಬೈದು ಜೀವ ಬೆದರಿಕೆ ಹಾಕಿರುತ್ತಾನೆ.


ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Related posts

ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ವಾಲಿಬಾಲ್ ತಂಡ

Madhyama Bimba

ನಕ್ರೆ: ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನ ಉದ್ಘಾಟನೆ

Madhyama Bimba

5ನೇ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷರು, ಮಾಜಿ ಸಂಸದರಾದ ಡಾ. ಸಿ. ನಾರಾಯಣಸ್ವಾಮಿ ಉಡುಪಿ ಜಿಲ್ಲೆಗೆ ಭೇಟಿ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More