ಕಾರ್ಕಳಹೆಬ್ರಿ

ಮುಂಗಾರು ಬೆಳೆ ಸಮೀಕ್ಷೆ: ಆಕ್ಷೇಪಣೆ ಸಲ್ಲಿಕೆಗೆ ಅವಕಾಶ

ಜಿಲ್ಲೆಯಲ್ಲಿ ಜಿ.ಪಿ.ಎಸ್ ಆಧಾರಿತ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯವು ಖಾಸಗಿ ನಿವಾಸಿಗಳ ಮೂಲಕ ಕೈಗ್ಗೊಳ್ಳಲಾಗುತ್ತಿದ್ದು, ಬೆಳೆ ಸಮೀಕ್ಷೆ ಮಾಹಿತಿಯನ್ನು ಪ್ರಕೃತಿ ವಿಕೋಪಗಳ ಪರಿಹಾರ ವಿತರಣೆ, ಬೆಳೆ ವಿಮೆ ಯೋಜನೆ ಅನುಷ್ಠಾನ, ಬೆಳೆ ಸಾಲ, ಪಹಣಿಯಲ್ಲಿ ಬೆಳೆ ವಿವರ ದಾಖಲಿಸಲು, ಬೆಂಬಲ ಬೆಲೆ ಯೋಜನೆಯ ಅರ್ಹ ಫಲಾನುಭವಿಗಳ ಗುರುತಿಸುವಿಕೆ, ಋತುಮಾನವಾರು ವಿವಿಧ ಬೆಳೆಗಳ ವಿಸ್ತೀರ್ಣ ವರದಿ ಕಾರ್ಯ, ಬೆಳೆ ಕಟಾವು ಪ್ರಯೋಗ ಅನುಷ್ಠಾನ ಹಾಗೂ ಕೃಷಿ/ತೋಟಗಾರಿಕೆ/ರೇಷ್ಮೆ ಇಲಾಖೆಗಳ ಫಲಾನುಭವಿ ಆಧಾರಿತ ಯೋಜನೆಗಳ ಅನುಷ್ಠಾನಕ್ಕೆ ಬಳಸಲಾಗುವುದು.


ಬೆಳೆ ಸಮೀಕ್ಷೆಯಲ್ಲಿ ನಮೂದಾದ ಬೆಳೆಗಳ ಬಗ್ಗೆ ರೈತರಿಗೆ ಆಕ್ಷೇಪಣೆ ಇದ್ದಲ್ಲಿ “ಬೆಳೆ ದರ್ಶಕ್” ಮೊಬೈಲ್ ಆಪ್ ಮೂಲಕ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶವಿದ್ದು, , “Bele Darshak – 2024-2025” ಆಪ್ ಅನ್ನು ಗೂಗಲ್ ಪ್ಲೇ ಸ್ಟೋರ್‌ನಿಂದ ಡೌನ್‌ಲೋಡ್ ಮಾಡಿಕೊಂಡು ಆಕ್ಷೇಪಣೆಯನ್ನು ಸಲ್ಲಿಸಬಹುದಾಗಿದೆ.

ರೈತರಿಂದ ಸ್ವೀಕೃತವಾದ ಆಕ್ಷೇಪಣೆಗಳನ್ನು ಸಂಬಂಧಿಸಿದ ಗ್ರಾಮದ ಮೇಲ್ವಿಚಾರಕರಿಂದ ಪರಿಶೀಲಿಸಿ ಆಕ್ಷೇಪಣೆಗಳನ್ನು ಇತ್ಯರ್ಥಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

Related posts

ಭಾರತ ವಾಲಿಬಾಲ್ ತಂಡದ ನಾಯಕಿಯಾಗಿ ಕಾರ್ಕಳದ ಶಗುನ್ ಎಸ್ ವರ್ಮ

Madhyama Bimba

ಕಾರ್ಕಳ ಜೋಡುರಸ್ತೆಯ ದುರ್ಗಾ ಎಲೆಕ್ರ್ಟಾನಿಕ್ಸ್ & ಫರ್ನಿಚರ್ಸ್’ನಲ್ಲಿ ವಿಶೇಷ ಕೊಡುಗೆಗಳು ಲಭ್ಯ-ಪ್ರತಿಯೊಂದು ಖರೀದಿಯ ಮೇಲೆ ವಿಶೇಷ ರಿಯಾಯಿತಿ ಮತ್ತು ಗಿಫ್ಟ್ ಕೂಪನ್

Madhyama Bimba

2024-25 ನೇ ಸಾಲಿಗೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಮಾಧ್ಯಮ ಮಾನ್ಯತೆ ಹೊಂದಿದ ಪತ್ರಕರ್ತರಿಗೆ ಮೀಡಿಯಾ ಕಿಟ್: ಅರ್ಜಿ ಆಹ್ವಾನ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More