ಕಾರ್ಕಳ

 ನಿಟ್ಟೆ ಶ್ರೀ ರಾಜ ರಾಜೇಶ್ವರಿ ಸದ್ಗುರು ಶ್ರೀ ನಿತ್ಯಾನಂದ ಕ್ಷೇತ್ರ ನೆಲ್ಲಿ ಇದರ ಬ್ರಹ್ಮ ಕಲಶೋತ್ಸವ ಸಮಿತಿ ಅಧ್ಯಕ್ಷರಾಗಿ ಸುನಿಲ್ ಕುಮಾರ್

ಶ್ರೀ ಕ್ಷೇತ್ರ ನೆಲ್ಲಿ, ಶ್ರೀ ರಾಜ ರಾಜೇಶ್ವರಿ ಸದ್ಗುರು ಶ್ರೀ ನಿತ್ಯಾನಂದ ಕ್ಷೇತ್ರ ನೆಲ್ಲಿ ನಿಟ್ಟೆ ಇದರ ಬ್ರಹ್ಮ ಕಲಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಮಾಜಿ ಸಚಿವರು ಹಾಗೂ ಶಾಸಕರಾದ ಸುನಿಲ್ ಕುಮಾರ್ ರನ್ನು ಆಯ್ಕೆ ಮಾಡಲಾಯಿತು.

ಕ್ಷೇತ್ರದಲ್ಲಿ ನಡೆದ ಭಿತ್ತಿ ಪತ್ರ ಬಿಡುಗಡೆ ಸಂದರ್ಭದಲ್ಲಿ ಈ ಘೋಷಣೆ ಮಾಡಲಾಯಿತು.
ಭಿತ್ತಿ ಪತ್ರ ಬಿಡುಗಡೆ ಸಮಾರಂಭದಲ್ಲಿ ಶ್ರೀನಿವಾಸ್ ಆಚಾರ್ಯ, ಹುಬ್ಬಳ್ಳಿ ಧಾರವಾಡ ಮಹಾ ನಗರ ಪಾಲಿಕೆಯ ಮುಖ್ಯ ಅಧಿಕಾರಿ ಶ್ರೀಧರ ಟಿ ಎನ್, ಉದ್ಯಮಿಗಳಾದ ವಿಜಯ ಶೆಟ್ಟಿ, ಮನ್ಮಥ ಶೆಟ್ಟಿ, ಅರುಣ್ ನಿಟ್ಟೆ
ಈ ಕ್ಷೇತ್ರ ಸುಮಾರು 9 ಕೋಟಿ ವೆಚ್ಚದಲ್ಲಿ ರೂಪುಗೊಳ್ಳುತ್ತಿದೆ.

ಬಹಳಷ್ಟು ಧಾರ್ಮಿಕ ಹಿನ್ನೆಲೆಯುಳ್ಳ ಈ ಕ್ಷೇತ್ರದ ಆಡಳಿತ ಮೊಕ್ತೇಸರರಾಗಿರುವ ಸುನಿಲ್ ಕೆ ಆರ್ ರವರು ಈ ಕ್ಷೇತ್ರವನ್ನು ಸುಂದರವಾಗಿ ರೂಪುಗೊಳಿಸುವ ನಿಟ್ಟಿನಲ್ಲಿ ಅವಿರತ ಶ್ರಮಿಸುತ್ತಿದ್ದಾರೆ.

ಈ ಕ್ಷೇತ್ರದಲ್ಲಿ ಬ್ರಹ್ಮ ಕಲಶ ನಡೆಯಲಿದ್ದು ಭರದಿಂದ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿದೆ.

Related posts

ಸಂತ ಲಾರೆನ್ಸರ ವಾರ್ಷಿಕ ಮಹೋತ್ಸವದ ಭವ್ಯ ಸಮಾರೋಪ

Madhyama Bimba

ನಿಟ್ಟೆಯ ಯುವತಿ ಕಾಣೆ

Madhyama Bimba

ಕಾರ್ಕಳ: ಮುಡಾರು ನಿವಾಸಿ ನೇಣು ಬಿಗಿದು ಆತ್ಮಹತ್ಯೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More