ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಇವರ ಸಹಯೋಗದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಬಜಗೋಳಿ ಇಲ್ಲಿನ 12ನೇ ವರ್ಷದ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭವು “ಜೀವ ವಿರೋಧಿ ಹೆಣ್ಣು ಭ್ರೂಣ ಹತ್ಯೆ ನಿಲ್ಲಿಸಿ ಲಿಂಗ ಸಮಾನತೆ ಸಾಧಿಸಿ” ಹಾಗು “ನಮ್ಮ ಭಾರತಕ್ಕಾಗಿ ನಮ್ಮ ಯುವಜನತೆ ” ನಮ್ಮ ಎಂಬ ಶಿರೋನಾಮೆಯ ಅಡಿಯಲ್ಲಿ ಕೂಡ ಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವೇದಿಕೆಯಲ್ಲಿ ಜರುಗಿತು.

ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರು ಹಾಗು ಬಜಗೋಳಿಯ ಸುಪ್ರಸಿದ್ಧ ವೈದ್ಯರಾದ ಡಾ. ವೆಂಕಟಗಿರಿ ರಾವ್ ಇವರು ತಮ್ಮ ಸಮಾರೋಪ ಭಾಷಣದಲ್ಲಿ ” ಭ್ರೂಣ ಹತ್ಯೆಯು ವೈದ್ಯಕೀಯ ವಲಯ ತಲೆ ತಗ್ಗಿಸುವ ವಿಚಾರವಾಗಿದ್ದು” ಇದರ ಬಗ್ಗೆ ವೈದ್ಯ ಸಮೂದಾಯ ಅಲೋಚನೆ ಮಾಡಬೇಕಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಸುಮಾರು ಏಳು ದಿನಗಳ ಶಿಬಿರದಲ್ಲಿ ಮುನಿರಾಜ ರೇಂಜಾಳ ಇವರಿಂದ ” ಪರಿಪೂರ್ಣ ಶಿಕ್ಷಣ “, ಡಾ.ಸತ್ಯನಾರಾಯಣ ಭಟ್ ಇವರಿಂದ ” ನಮ್ಮ ಪರಿಸರ ನಮ್ಮ ಜವಾಬ್ದಾರಿ ” ಡಾ. ಚಂದ್ರಕಾಂತ ಜೋಷಿ ಇವರಿಂದ ” ಊಟ ಬಲ್ಲವನಿಗೆ ರೋಗವಿಲ್ಲ “, ಬೆನೆಡಿಕ್ಟ್ ಫೆರ್ನಾಂಡಿಸ್ ಇವರಿಂದ ” ಮಾಹಿತಿ ಹಕ್ಕುಗಳ ಅಧಿನಿಯಮ” ಶ್ರೀಮತಿ ಆರತಿ ಅಶೋಕ್ ಇವರಿಂದ ” ನಮ್ಮ ನೈಸರ್ಗಿಕ ಸಂಪನ್ಮೂಲಗಳ ಪ್ರಾಮುಖ್ಯತೆ “ಸಂತೋಷ್ ಮಾಳ ಇವರಿಂದ “ಕರಕೌಶಲ್ಯ”, ಸುಜಿತ್ ಮಾಳ ಇವರಿಂದ “ರಂಗತರಬೇತಿ” ಮುಂತಾದವುಗಳ ಬಗ್ಗೆ ವಿಚಾರಧಾರೆ ಕಾರ್ಯಕ್ರಮಗಳು ಜರಗಿದವು.

ರೋಟರಿ ಕ್ಲಬ್ ಕಾರ್ಕಳ ಹಾಗು ವನ್ಯ ಜೀವಿ ಉಪವಿಭಾಗ ಕಾರ್ಕಳ ಇವರ ಸಹಯೋಗದೊಂದಿಗೆ “ಕುದುರೆಮುಖ ಅರಣ್ಯ ವಲಯದಲ್ಲಿ ಪ್ಲಾಸ್ಟಿಕ್ ತ್ಯಾಜ್ಯಗಳ ಸಂಗ್ರಹ ಮತ್ತು ವಿಲೇವಾರಿ” ಕಾರ್ಯಕ್ರಮ ನಡೆಯಿತು.
ಶ್ರೀಮತಿ ಆರತಿ ಅಶೋಕ್ ಇವರ ಸಹಯೋಗದೊಂದಿಗೆ ” ಸ್ವರ್ಣ ನದಿ ತಟಗಳಲ್ಲಿ ಸುಮಾರು ೩೦೦ ಗಿಡಗಳನ್ನು ನೆಟ್ಟು ಜಲರಕ್ಷಣೆ” ಕಾರ್ಯ ನಡೆಯಿತು.

ಸಮಾರೋಪ ಸಮಾರಂಭದಲ್ಲಿ ದ್ವಿತೀಯ ಪಿ.ಯು .ಸಿ ವಾರ್ಷಿಕ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾದ 7 ಜನ ಸ್ವಯಂಸೇವಕರನ್ನು ಸನ್ಮಾನಿಸಲಾಯಿತು.

ಉದ್ಯಮಿ ವಿಶ್ವೇಶ್ವರ ಜೋಶಿ, “ಅಮ್ಮನ ನೆರವು” ಟ್ರಸ್ಟ್ ನ ಅವಿನಾಶ್ ಜಿ ಶೆಟ್ಟಿ, ವಿಶ್ರಾಂತ ಮುಖ್ಯೋಪಾಧ್ಯಾಯರಾದ ವಸಂತ್ ಎಂ, ವಸಂತ್ ಸೇರಿಗಾರ್, ಸುಧಾಕರ್ ಶೆಟ್ಟಿ , ಶ್ರೀಮತಿ ಹರಿಣಿ, ಯೂಟ್ಯೂಬ್ ಚಾನೆಲ್ನ ಚಂದು, ದಿವಾಕರ್ ಶೇರ್ವೆಗಾರ್ ಉಪಸ್ಥಿತರಿದ್ದರು.
ಸ್ವಯಂಸೇವಕರಾದ ಗುರುಪ್ರಸಾದ್ ಮತ್ತು ಅಶ್ವಿತಾ ಶಿಬಿರದ ಅನಿಸಿಕೆಗಳನ್ನು ಹಂಚಿಕೊಂಡರು. ಶ್ರೀಮತಿ ಸಂಧ್ಯಾ ಸ್ವಾಗತಿಸಿ,
ಕಾರ್ಯಕ್ರಮ ಅಧಿಕಾರಿ ಪ್ರವೀಣ್ ಕುಮಾರ್ ಶೆಟ್ಟಿ ಶಿಬಿರದ ವರದಿ ವಾಚಿಸಿ, ವಂದಿಸಿದರು. ಸ್ವಯಂಸೇವಕಿ ಅನ್ವಿತಾ ಕಾರ್ಯಕ್ರಮ ನಿರೂಪಿಸಿದರು.
ಅತ್ಯುತ್ತಮ ಕಾರ್ಯನಿರ್ವಾಹಣ ತಂಡವಾಗಿ ” ಚಿಗುರು” ತಂಡ ಹಾಗು ಉತ್ತಮ ತಂಡವಾಗಿ ” ನಿಸರ್ಗ ” ತಂಡ ಕ್ರಿಯಾಶೀಲ ತಂಡವಾಗಿ ” ಬೆಳಕು” ತಂಡಗಳು ಪ್ರಶಸ್ತಿಯನ್ನು ಪಡೆದುಕೊಂಡವು.
