ಕಾರ್ಕಳ

ಕಾರ್ಕಳದ ತೆಳ್ಳಾರು ರಸ್ತೆಯ ಬಳಿ ಪಾದಚಾರಿಗೆ ಬೈಕ್ ಡಿಕ್ಕಿ: ಗಾಯ

ಕಾರ್ಕಳ: ಕಾರ್ಕಳದ ತೆಳ್ಳಾರು ರಸ್ತೆಯಲ್ಲಿ ಬೈಕೊಂದು ಪಾದಚಾರಿಗೆ ಡಿಕ್ಕಿ ಹೊಡೆದ ಘಟನೆ ವರದಿಯಾಗಿದೆ.


ದಿನಾಂಕ 13.10.2024 ರಂದು ರಾತ್ರಿ 8.10 ಗಂಟೆಗೆ KA-20-EN-5111 ನೇ ಮೋಟಾರ್ ಸೈಕಲ್ ಸವಾರ ಸುನೀಲ್ ಎಂಬವರು ಮೋಟಾರ್ ಸೈಕಲ್ ನ್ನು ಅನಂತಶಯನದ ಕಡೆಯಿಂದ ದುರ್ಗ ಕಡೆಗೆ ರಸ್ತೆಯ ಎಡಬದಿಗೆ ಚಲಾಯಿಸಿ ಕೊಂಡು ಬಂದು ಕಾರ್ಕಳ ಕಸಬಾ ಗ್ರಾಮದ ನಿಟ್ಟೆ ಗಾಜ್ರಿಯಾ ಆಸ್ಪತ್ರೆಯ ಬಳಿ ದುರ್ಗ ಕಡೆಯಿಂದ ಅನಂತಶಯನದ ಕಡೆಗೆ ರಸ್ತೆಯ ಬಲಬದಿಯಲ್ಲಿ ಮಣ್ಣು ರಸ್ತೆಯಲ್ಲಿ ನಡೆದುಕೊಂಡು ಬರುತ್ತಿದ್ದ ಯಶೋದಾ ಎಂಬುವವರಿಗೆ ಎದುರುಗಡೆಗೆ ಡಿಕ್ಕಿ ಹೊಡೆದ ಪರಿಣಾಮ ಯಶೋದಾ ರವರು ಡಾಮಾರು ರಸ್ತೆಗೆ ಬಿದ್ದು ಎಡ ಪಕ್ಕೆಗೆ ಬಲವಾದ ಪೆಟ್ಟು ಬಿದ್ದಿರುತ್ತದೆ.


ಗಾಯಗೊಂಡ ಯಶೋದಾರವರನ್ನು ಚಿಕಿತ್ಸೆಯ ಬಗ್ಗೆ ಕಾರ್ಕಳದ ನಿಟ್ಟೆ ಗಾಜ್ರಿಯಾ ಆಸ್ಪತ್ರೆಗೆ ಕರೆದುಕೊಂಡು ಹೋಗಿ ನಂತರ ಅಲ್ಲಿಂದ ಹೆಚ್ಚಿನ ಚಿಕಿತ್ಸೆಯ ಬಗ್ಗೆ ಮಂಗಳೂರಿನ ದೇರಳಕಟ್ಟೆ ಕೆ ಎಸ್ ಹೆಗ್ಡೆ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.

ಈ ಅಪಘಾತದಿಂದ ಮೋಟಾರ್ ಸೈಕಲ್ ಸವಾರ ಸುನೀಲ್ ನಿಗೂ ಗಾಯಗಳಾಗಿರುತ್ತವೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Related posts

ಪಡುಕುಡೂರು ಡೈರಿ ಅಧ್ಯಕ್ಷರಾಗಿ ಜಗದೀಶ ಹೆಗ್ಡೆ

Madhyama Bimba

ಕ್ರೈಸ್ಟ್‌ಕಿಂಗ್: ತುಳುನಾಡ ಇತಿಹಾಸ ದರ್ಶನ ಉಪನ್ಯಾಸ ಕಾರ್ಯಕ್ರಮ

Madhyama Bimba

ಎನ್‌ಐಎಫ್‌ಟಿ ಪರೀಕ್ಷಾ ಫಲಿತಾಂಶ ಪ್ರಕಟ: ಕ್ರಿಯೇಟಿವ್ ಕಾಲೇಜು ಕಾರ್ಕಳದ ವಿದ್ಯಾರ್ಥಿಗಳ ಅಮೋಘ ಸಾಧನೆ.

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More