ಮೂಡುಬಿದಿರೆ

ಬಿಜೆಪಿ ಅಭ್ಯರ್ಥಿ ಪರವಾಗಿ ಶಾಸಕರಾದ ಉಮಾನಾಥ್ ಕೋಟ್ಯಾನ್ ಮತಯಾಚನೆ

ಮೂಡುಬಿದಿರೆ ತಾಲೂಕಿನ ಪಾಲಡ್ಕ, ಪುತ್ತಿಗೆ, ಬೆಳುವಾಯಿ, ಪಡುಮಾರ್ನಾಡು, ಶಿರ್ತಾಡಿ, ದರೆಗುಡ್ಡೆ, ವಾಲ್ಪಾಡಿ, ನೆಲ್ಲಿಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿಧಾನಪರಿಷತ್ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಅವರ ಪರವಾಗಿ ಶಾಸಕರಾದ ಉಮಾನಾಥ್ ಕೋಟ್ಯಾನ್ ಅವರು ಚುನಾವಣಾ ಪ್ರಚಾರ ನಡೆಸಿದರು. ಪಂಚಾಯತ್ ಸದಸ್ಯರನ್ನು ಭೇಟಿಯಾಗಿ ಬಿಜೆಪಿ ಅಭ್ಯರ್ಥಿಯನ್ನು ವಿಜಯಿಯಾಗಿಸುವಂತೆ ವಿನಂತಿಸಿದರು.


ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷರಾದ ದಿನೇಶ್ ಪುತ್ರನ್, ಜಿಲ್ಲಾ ಉಪಾಧ್ಯಕ್ಷರಾದ ಸುನಿಲ್ ಆಳ್ವ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ರಂಜಿತ್ ಪೂಜಾರಿ ತೋಡಾರು ,ಸೇರಿದಂತೆ ಪಂಚಾಯತ್ ಅಧ್ಯಕ್ಷರುಗಳು, ಉಪಾಧ್ಯಕ್ಷರುಗಳು, ಸದಸ್ಯರು, ಪಕ್ಷದ ಪ್ರಮುಖರು, ಮುಖಂಡರು ಉಪಸ್ಥಿತರಿದ್ದರು.

Related posts

 ಮಿಜಾರು ಶಾಲಾ ಕಟ್ಟಡಕ್ಕೆ ಆಟದ ಮೈದಾನ ಬಳಕೆಗೆ ಗ್ರಾಮಸ್ಥರ ವಿರೋಧ

Madhyama Bimba

ತೆಂಕಮಿಜಾರುನಲ್ಲಿ1 ಕೋ.ವೆಚ್ಚದ ಅಶ್ವತ್ಥಪುರ-ಸಂಪಿಗೆ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ

Madhyama Bimba

ದಕ್ಷಿಣ ಕನ್ನಡ ಜಿಲ್ಲಾಮಟ್ಟದ ಪದವಿಪೂರ್ವ ಕಾಲೇಜುಗಳ ಗುಡ್ಡಗಾಡು ಓಟ- ಎರಡೂ ವಿಭಾಗದಲ್ಲೂ ಮೂಡುಬಿದಿರೆ ಆಳ್ವಾಸ್ ಪದವಿ ಪೂರ್ವ ಕಾಲೇಜು ಚಾಂಪಿಯನ್

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More