ಕಾರ್ಕಳ

ಹಿಂದೂ ತಾಯಂದಿರ ಬಗ್ಗೆ ಅಸಭ್ಯವಾಗಿ ಮಾತನಾಡುವ ವಲಯ ಅರಣ್ಯಾಧಿಕಾರಿ ಸಂಜೀವ ಕಾಣೆಯೂರು ಇದು ಕೊನೆಯ ಎಚ್ಚರಕೆ : ಸಾಮಾಜಿಕ ಕಾರ್ಯಕರ್ತೆ ಶ್ರೀಮತಿ ರಮಿತಾ ಶೈಲೇಂದ್ರ

ಉಪವಲಯ ಅರಣ್ಯ ಅಧಿಕಾರಿಯಾಗಿರುವ ಸಂಜೀವ ಪೂಜಾರಿ ಕಾಣೆಯೂರು ಎಂಬ ವ್ಯಕ್ತಿಯು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ಲಕ್ಷ ಪೂಜಾರಿ ಹುಡುಗಿಯರು ಸೂಳೆಯರಾಗಿದ್ದಾರೆ ಎಂಬುದು ನನ್ನ ಬಳಿ ದಾಖಲೆ ಇದೆ ಎಂಬ ಹೇಳಿಕೆಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದು ಭಜನೆಗೆ ಹೋಗುತ್ತಿರುವಂತಹ ಹೆಣ್ಣು ಮಕ್ಕಳ ಬಗ್ಗೆ ಅಸಹ್ಯವಾಗಿ ಮಾತನಾಡಿರುತ್ತಾರೆ.


ತನ್ನ ಮನೆಯ ಹೆಣ್ಣು ಮಕ್ಕಳನ್ನು ಅಸಹ್ಯ ರೀತಿಯಲ್ಲಿ ನೋಡುವ ಮನಸ್ಥಿತಿ ಇರುವಂತಹ ವ್ಯಕ್ತಿತ್ವ ಹೊಂದಿರುವ ವ್ಯಕ್ತಿಯಿಂದ ಮಾತ್ರ ಇಂತಹ ಮಾತುಗಳು ಬರುವಂತಹದ್ದು ಒಬ್ಬ ಸರಕಾರಿ ಉನ್ನತ ಮಟ್ಟದ ಹುದ್ದೆಗಳಲ್ಲಿ ಇರುವಂತಹ ವ್ಯಕ್ತಿಯ ನಾಲಗೆಯಲ್ಲಿ ಇಂತಹ ಮಾತುಗಳು ಸಂಸ್ಕಾರ ಹೀನ ಮಾತುಗಳು ಬರುವುದು ಶೋಭೆಯಲ್ಲ.

ಹಿಂದೂ ಸಂಸ್ಕೃತಿಯಲ್ಲಿ ಸ್ತ್ರೀ ಯನ್ನು ಮಾತೆಯ ರೂಪದಲ್ಲಿ ನೋಡಿರುವುದು ಹೊರತು ಇವರಂತಹ ಮಾನಸಿಕ ಸ್ಥಿಮಿತ ಕಳೆದುಕೊಂಡಿರುವ ವ್ಯಕ್ತಿಯ ಬಳಿ ಹೇಳಿಸಿಕೊಳ್ಳುವ ಪರಿಸ್ಥಿತಿ ನಮ್ಮ ಹಿಂದೂ ಸಮಾಜಕ್ಕೆ ಬಂದಿಲ್ಲ ಬಿಲ್ಲವ ಸಮಾಜದ ಮಾತೃಶಕ್ತಿ ಮತ್ತು ಭಜನಾ ಮಂಡಳಿಯ ಮಾತೃ ಶಕ್ತಿಗೆ ಮಾಡಿದ ಅವಮಾನಕ್ಕೆ ಹಾಗೂ ಹೆಣ್ಣು ಮಕ್ಕಳ ಚಾರಿತ್ರ್ಯವನ್ನು ವದೆ ಮಾಡಿರುವುದು ತೀವ್ರ ಖಂಡನೀಯ ಈತನ ವಿರುದ್ಧ ಪೊಲೀಸ ಇಲಾಖೆ ಸುಮೋಟೋ ಕೇಸ್ ಅನ್ನು ದಾಖಲಿಸಿ ಕೂಡಲೇ ಬಂಧಿಸಬೇಕು ಹಾಗೂ ಸರಕಾರ ಸಂಜೀವ ಪೂಜಾರಿ ಕಾಣಿಯೂರು ಅವರನ್ನು ಸರಕಾರ ಕೆಲಸದಿಂದ ವಜಾ ಮಾಡಿ ಬಿಲ್ಲವ ಸಮಾಜದ ಹೆಣ್ಣು ಮಕ್ಕಳಿಗೆ ನ್ಯಾಯವನ್ನು ಒದಗಿಸಬೇಕೆಂದು ಆಗ್ರಹಿಸುತ್ತೇನೆ ಇಲಾಖೆಯು ಈತನ ಮೇಲೆ ಕಾನೂನು ಕ್ರಮವನ್ನು ತೆಗೆದುಕೊಳ್ಳದೆ ಆತನನ್ನು ಬಂಧಿಸದೆ ಬಿಟ್ಟರೆ ಹಿಂದೂ ಸಮಾಜದ ಹೆಣ್ಣು ಮಕ್ಕಳು ನೇರ ಆತನಿಗೆ ಪೂರಕ್ಕೆ ಕl ಸೇವೆ ಮಾಡಬೇಕಾಗಿತ್ತು ಎಚ್ಚರಿಕೆ.

Related posts

  ಶಿರ್ತಾಡಿಯಲ್ಲಿ ಕರುಂಗೋಲು ಕುಣಿತದ ಆಚರಣೆ

Madhyama Bimba

ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : “ಹೊಂಗನಸು” ವಿಶೇಷ ಕಾರ್ಯಕ್ರಮ

Madhyama Bimba

ಕಾರ್ಕಳ: ಬ್ಯಾರಿಕೇಡ್ ಹಸ್ತಾಂತರ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More