Blogಮೂಡುಬಿದಿರೆ

ಸಂಜೀವ ಕಾಣಿಯೂರು  ಹೇಳಿಕೆಗೆ  ಮೂಡುಬಿದಿರೆ ಸಂಘ ಖಂಡನೆ

ಜವಾಬ್ದಾರಿಯುತ ಸರಕಾರಿ ಹುದ್ದೆಯಲ್ಲಿರುವ ಪುತ್ತೂರು ಉಪ ಸಂರಕ್ಷಣಾ ಅಧಿಕಾರಿ ಸಂಜೀವ ಕಾಣಿಯೂರು  ಬಿಲ್ಲವ ಸಮಾಜದ ಹೆಣ್ಣು ಮಕ್ಕಳ ಬಗ್ಗೆ ಹಾಗೂ ಹಿಂದೂ ಸಮಾಜದ ಧಾರ್ಮಿಕ ನಂಬಿಕೆಯ ಬಗ್ಗೆ ತುಚ್ಚವಾಗಿ, ಮಾನಸಿಕ ಸ್ಥಿಮಿತ ಕಳೆದುಕೊಂಡವರಂತೆ ನೀಡಿರುವ ಹೇಳಿಕೆಯನ್ನು   ಮೂಡುಬಿದಿರೆ ಬ್ರಹ್ಮಶ್ರೀ ಗುರುನಾರಾಯಣ ಸೇವಾಸಂಘ (ರಿ) ಖಂಡಿಸಿದೆ.  ಈ ವ್ಯಕ್ತಿಯ  ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಂಬಂಧ ಪಟ್ಟ ಇಲಾಖೆಗೆ ಸಂಘ ಒತ್ತಾಯಿಸಿದೆ. ಸಂಘದ ಅಧ್ಯಕ್ಷರಾದ ಸುರೇಶ್ ಕೆ ಪೂಜಾರಿ ಅಧ್ಯಕ್ಷತೆಯಲ್ಲಿ ಸಂಘದ ಕಚೇರಿ ಯಲ್ಲಿ ಖಂಡನಾ ಸಭೆ ನಡೆಯಿತು. ಪ್ರಧಾನ ಕಾರ್ಯದರ್ಶಿ ಗಿರೀಶ್ ಕುಮಾರ್ ಹಂಡೇಲು,
ಉಪಾಧ್ಯಕ್ಷರಾದ ರವೀಂದ್ರ ಕರ್ಕೇರಾ, ಸುಶಾಂತ್ ಕರ್ಕೇರಾ
 ಕೋಶಾಧಿಕಾರಿ ಜಗದೀಶ್ ಪೂಜಾರಿ ಮಿಜಾರು, ಮಹಿಳಾ ಘಟಕ ಅಧ್ಯಕ್ಷ ಶ್ರೀಮತಿ ಸವಿತಾ ದಿನೇಶ್ , ಜೊತೆ ಕಾರ್ಯದರ್ಶಿ ವಸಂತ ಸುವರ್ಣ, ಪದಾಧಿಕಾರಿಗಳಾದ ಸದಾನಂದ ಪೂಜಾರಿ, ಶಿವಪ್ಪ ಪೂಜಾರಿ, ಶಶಿಧರ ಅಂಚನ್, -ನವೀನ್ ಪಿ ಕುಂದರ್, ಕುಮಾರ್ ಬೈಲಾರೆ ಭಾಗವಹಿಸಿದ್ದರು.

Related posts

ಎಂಸಿಎಸ್ ಸೊಸೈಟಿ ವಿಶೇಷ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ ಎಂ.ರಿಗೆ ಸಮಾಜ ಮಂದಿರ ಪುರಸ್ಕಾರ ಪ್ರದಾನ- ಪಿ.ಎಲ್. ಧರ್ಮ, ಸಂದೇಶ್ ಪಿ.ಜಿ.ಯವರಿಗೆ ಸನ್ಮಾನ

Madhyama Bimba

ಈದುವಿನಲ್ಲಿ ಧರ್ಮಸ್ಥಳ ಸಂಘದ ಸಂಭ್ರಮ ಆಚರಣೆ

Madhyama Bimba

ಬ್ರಹ್ಮಕಲಶೋತ್ಸವ ಸಿದ್ಧತೆಯಲ್ಲಿರುವ ಮಾರೂರು ಹೊಸಂಗಡಿ ಗೋಪಾಲಕೃಷ್ಣ ಕೊಡಮಣಿತ್ತಾಯ ದೇವಸ್ಥಾನ ನೂತನ ಕೊಡಿಮರ ಪ್ರತಿಷ್ಠಾಪನೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More