Blogಮೂಡುಬಿದಿರೆ

ಸಂಜೀವ ಕಾಣಿಯೂರು  ಹೇಳಿಕೆಗೆ  ಮೂಡುಬಿದಿರೆ ಸಂಘ ಖಂಡನೆ

ಜವಾಬ್ದಾರಿಯುತ ಸರಕಾರಿ ಹುದ್ದೆಯಲ್ಲಿರುವ ಪುತ್ತೂರು ಉಪ ಸಂರಕ್ಷಣಾ ಅಧಿಕಾರಿ ಸಂಜೀವ ಕಾಣಿಯೂರು  ಬಿಲ್ಲವ ಸಮಾಜದ ಹೆಣ್ಣು ಮಕ್ಕಳ ಬಗ್ಗೆ ಹಾಗೂ ಹಿಂದೂ ಸಮಾಜದ ಧಾರ್ಮಿಕ ನಂಬಿಕೆಯ ಬಗ್ಗೆ ತುಚ್ಚವಾಗಿ, ಮಾನಸಿಕ ಸ್ಥಿಮಿತ ಕಳೆದುಕೊಂಡವರಂತೆ ನೀಡಿರುವ ಹೇಳಿಕೆಯನ್ನು   ಮೂಡುಬಿದಿರೆ ಬ್ರಹ್ಮಶ್ರೀ ಗುರುನಾರಾಯಣ ಸೇವಾಸಂಘ (ರಿ) ಖಂಡಿಸಿದೆ.  ಈ ವ್ಯಕ್ತಿಯ  ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಂಬಂಧ ಪಟ್ಟ ಇಲಾಖೆಗೆ ಸಂಘ ಒತ್ತಾಯಿಸಿದೆ. ಸಂಘದ ಅಧ್ಯಕ್ಷರಾದ ಸುರೇಶ್ ಕೆ ಪೂಜಾರಿ ಅಧ್ಯಕ್ಷತೆಯಲ್ಲಿ ಸಂಘದ ಕಚೇರಿ ಯಲ್ಲಿ ಖಂಡನಾ ಸಭೆ ನಡೆಯಿತು. ಪ್ರಧಾನ ಕಾರ್ಯದರ್ಶಿ ಗಿರೀಶ್ ಕುಮಾರ್ ಹಂಡೇಲು,
ಉಪಾಧ್ಯಕ್ಷರಾದ ರವೀಂದ್ರ ಕರ್ಕೇರಾ, ಸುಶಾಂತ್ ಕರ್ಕೇರಾ
 ಕೋಶಾಧಿಕಾರಿ ಜಗದೀಶ್ ಪೂಜಾರಿ ಮಿಜಾರು, ಮಹಿಳಾ ಘಟಕ ಅಧ್ಯಕ್ಷ ಶ್ರೀಮತಿ ಸವಿತಾ ದಿನೇಶ್ , ಜೊತೆ ಕಾರ್ಯದರ್ಶಿ ವಸಂತ ಸುವರ್ಣ, ಪದಾಧಿಕಾರಿಗಳಾದ ಸದಾನಂದ ಪೂಜಾರಿ, ಶಿವಪ್ಪ ಪೂಜಾರಿ, ಶಶಿಧರ ಅಂಚನ್, -ನವೀನ್ ಪಿ ಕುಂದರ್, ಕುಮಾರ್ ಬೈಲಾರೆ ಭಾಗವಹಿಸಿದ್ದರು.

Related posts

ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ ಹಾಗೂ ಬಾಲಕಿಯರ ಕುಸ್ತಿ ಪಂದ್ಯಾಟ 2024: ಆಳ್ವಾಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

Madhyama Bimba

ರಾಷ್ಟ್ರಮಟ್ಟದಲ್ಲಿ ಸ್ಪರ್ಧೆಗೆ ರಶ್ಮಿತಾ

Madhyama Bimba

ಕೆಸರ್ ಗದ್ದೆ ಮೀರಾ ಡಾಂಗೆ ಇನ್ನಿಲ್ಲ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More