ಕೋಟತಟ್ಟು ಗ್ರಾಮ ಪಂಚಾಯತಿ ಮತ್ತು ಶಿವರಾಮ ಕಾರಂತ ಪ್ರತಿಷ್ಠಾನ ,ಕೋಟ ಇವರು ಕೊಡಮಾಡುವ 2023-24 ನೇ ಸಾಲಿನ ಶಿವರಾಮ ಕಾರಂತ ಪ್ರಶಸ್ತಿ-2024 ” ಪ್ರಶಸ್ತಿಗೆ ಮೂಡಬಿದ್ರೆ ತಾಲೂಕು ಪಡುಮಾರ್ನಾಡು ಗ್ರಾಮ ಪಂಚಾಯತಿಯು ಆಯ್ಕೆಯಾಗಿದೆ.
ಪ್ರಶಸ್ತಿಯನ್ನು ನವೆಂಬರ್ 10ರಂದು ಕೋಟದಲ್ಲಿ ಪಂಚಾಯತಿ ಅಧ್ಯಕ್ಢರಾದ ವಾಸುದೇವ ಉಪಾಧ್ಯಾಯ ಮತ್ತು ಪಂಚಾಯತಿ ಅಭಿವೃದ್ಧಿ ಅಧಿಕಾರಿ ಹಾಗು ಸಹಾಯಕ ನಿರ್ದೇಶಕರು(ಪ್ರಭಾರ) ಸಾಯೀಶ ಚೌಟ ಮತ್ತು ಸದಸ್ಯರು ಮೇಘಾಲಯದ ಗೌರವಾನ್ವಿತ ರಾಜ್ಯಪಾಲರಿಂದ ಸ್ವೀಕರಿಸಲಿದ್ದಾರೆ.