*ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ..ರಾಜ್ಯಮಟ್ಟದ ಗೀತ ಗಾಯನ ಸ್ಪರ್ಧೆಯಲ್ಲಿ ವರ್ಧಮಾನ ಪ್ರಾಥಮಿಕ ಶಾಲೆ ಯ ವಿದ್ಯಾರ್ಥಿಗಳ ಸಾಧನೆ*…
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆಯ ವತಿಯಿಂದ ದಿನಾಂಕ 01.12.2024ರಂದು ತುಮಕೂರಿನಲ್ಲಿ ಆಯೋಜಿಸಲಾದ ಗೀತಾ ಗಾಯನ ದೇಶಭಕ್ತಿ ಗೀತೆ ಸ್ಪರ್ಧೆಯಲ್ಲಿ ವರ್ಧಮಾನ ಪ್ರಾಥಮಿಕ ಶಾಲೆ, ಸಾಣೂರು, ಕಾರ್ಕಳದ ಕಬ್ ದಳದ ವಿದ್ಯಾರ್ಥಿಗಳು ಅತ್ಯುನ್ನತ ಸಾಧನೆ ಮೆರೆದಿದ್ದಾರೆ.
ಈ ಸ್ಪರ್ಧೆಯಲ್ಲಿ ಆದಿತ್ ವರ್ಮ ಜೈನ್, ಮೇದಾಂಶ್ ಪಡುಮಲೆ, ಆರ್ಯನ್ ಜೈನ್, ಪ್ರಜ್ಞಾನ್ ಕೋಟ್ಯಾನ್, ಅಮೋಘ್ ಬಾಳಿಗ, ಹಾಗೂ ದೃವ್ ನಾಯಕ್ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡಿ ರಾಜ್ಯ ಮಟ್ಟದಲ್ಲಿ ದ್ವಿತೀಯ ಸ್ಥಾನವನ್ನು ಪಡೆದು ತಮ್ಮ ಪ್ರತಿಭೆಯನ್ನು ಮೆರೆದಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಶಾಲೆಯ ಸಂಚಾಲಕರಾದ ಶಶಿಕಲಾ ಕೆ. ಹೆಗ್ಡೆ, ಕುಮಾರಯ್ಯ ಹೆಗ್ಡೆ, ಆಡಳಿತಾಧಿಕಾರ ಕರ್ತವ್ಯ ಜೈನ್, ಹಾಗೂ ಶಿಕ್ಷಕ ವೃಂದದವರು ಅಭಿನಂದಿಸಿರುತ್ತಾರೆ.