Blog

ಹಿರಿಯ ನಾಗರಿಕರಿಗೆ ಉಚಿತ ನೇತ್ರ ತಪಾಸಣಾ ಶಿಬಿರ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲೆಯ ಹಿರಿಯ ನಾಗರಿಕರಿಗೆ 07 ತಾಲೂಕುಗಳಲ್ಲಿ ಉಚಿತ ನೇತ್ರ ತಪಾಸಣೆ, ಶಸ್ತ್ರಚಿಕಿತ್ಸಾ ಶಿಬಿರ ಮತ್ತು ಕನ್ನಡಕ ವಿತರಣಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.


ಡಿಸೆಂಬರ್ 15 ರಂದು ಕುಂದಾಪುರ ತಾಲೂಕಿನ ಶಂಕರನಾರಾಯಣ ಪ್ರಾಥಮಿಕ ಆರೋಗ್ಯ ಕೇಂದ್ರ, ಡಿ. 17 ರಂದು ಹೆಬ್ರಿ ತಾಲೂಕಿನ ಮುದ್ರಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಡಿ. 24 ರಂದು ಬ್ರಹ್ಮಾವರ ತಾಲೂಕಿನ ಬ್ರಹ್ಮಾವರ ಸಮುದಾಯ ಆರೋಗ್ಯ ಕೇಂದ್ರ, ಡಿ. 26 ರಂದು ಕಾರ್ಕಳ ತಾಲೂಕಿನ ನಿಟ್ಟೆ ಸಮುದಾಯ ಆರೋಗ್ಯ ಕೇಂದ್ರ ಮತ್ತು ಡಿ. 31 ರಂದು ಬೈಂದೂರು ತಾಲೂಕಿನ ಮರವಂತೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬೆಳಗ್ಗೆ 9.30 ರಿಂದ ಅಪರಾಹ್ನ 4.30 ಗಂಟೆಯವರೆಗೆ ಶಿಬಿರಗಳನ್ನು ಏರ್ಪಡಿಸಲಾಗಿದೆ.


ಶಿಬಿರಕ್ಕೆ ಹಾಜರಾಗುವ ಹಿರಿಯ ನಾಗರಿಕರು ವಯಸ್ಸಿನ ದಾಖಲೆ, ಆಧಾರ್ ಕಾರ್ಡ್ ಮತ್ತು ಪಡಿತರ ಚೀಟಿಯನ್ನು ಕಡ್ಡಾಯವಾಗಿ ತರಬೇಕು. ಈಗಾಗಲೇ ಕನ್ನಡಕ ಹೊಂದಿರುವ ನಾಗರೀಕರು ತಮ್ಮ ಹಳೆಯ ಕನ್ನಡಕವನ್ನು ಶಿಬಿರಕ್ಕೆ ತರಲು ಆರೋಗ್ಯಾಧಿಕಾರಿಗಳು ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಆಯಾ ವ್ಯಾಪ್ತಿಯ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ವಿ.ಆರ್.ಡಬ್ಲ್ಯೂ ಅಥವಾ ಇಲಾಖಾ ದೂರವಾಣಿ ಸಂಖ್ಯೆ: 0820-2574810 ಅನ್ನು ಸಂಪರ್ಕಿಸಬಹುದಾಗಿದೆ. ಸದರಿ ಶಿಬಿರಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಹಿರಿಯ ನಾಗರಿಕರು ಭಾಗವಹಿಸಿ ಶಿಬಿರದ ಪ್ರಯೋಜನ ಪಡೆಯುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Related posts

ಶತಾಯುಷಿ ಚಾರ ಹುತ್ತುರ್ಕೆ ಪುಟ್ಟಯ್ಯ ಶೆಟ್ಟಿ ನಿಧನ

Madhyama Bimba

ಕಾಂತಾವರ ಶಾಲೆ

Madhyama Bimba

ಉಡುಪಿ ಪೇಜಾವರ ಸ್ವಾಮಿಗಳ ಅವಹೇಳನ -ಉಡುಪಿ ಪೊಲೀಸ್ ಠಾಣೆಗೆ ದೂರು

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More