ಮೂಡುಬಿದಿರೆ

ಡಿ. 29 ರಂದು ಮೂಡುಬಿದಿರೆಯಲ್ಲಿ ಯುವವಾಹಿನಿ 37 ನೇ ಸಮಾವೇಶ- ಸಾಧಕರಿಗೆ ಸನ್ಮಾನ

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರು.
ಇದರ ಆಶ್ರಯದಲ್ಲಿ ಯುವವಾಹಿನಿ ಮೂಡುಬಿದ್ರಿ ಘಟಕದ ಆತಿಥ್ಯದಲ್ಲಿ 37ನೇ ವಾರ್ಷಿಕ ಸಮಾವೇಶವು ಮೂಡಬಿದ್ರೆ ಸೌಟ್ ಗೈಟ್ಸ್ ಕನ್ನಡ ಭವನದಲ್ಲಿ ಡಿಸೆಂಬರ್ 29ರಂದು ಬೆಳಿಗ್ಗೆ 9:30 ರಿಂದ ಜರಗಲಿದೆ.

ಸಮಾವೇಶದ ಉದ್ಘಾಟನೆಯನ್ನು ಮುಲ್ಕಿ ಮೂಡಬಿದರೆ ಕ್ಷೇತ್ರದ ಶಾಸಕರಾದ ಉಮಾನಾಥ ಎ. ಕೋಟ್ಯಾನ್ ಅವರು ನೆರವೇರಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಇವರು ವಹಿಸಲಿದ್ದಾರೆ. ಪ್ರಸಸ್ತಿ ಪ್ರದಾನ ಮಾಡಲಿರುವವರು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರು. ‘ಯುವಸಿಂಚನ’ ವಾರ್ಷಿಕ ವಿಶೇಷಾಂಕವನ್ನು ಭಾರತ್ ಕೋ-ಒಪರೇಟಿವ್ ಬ್ಯಾಂಕ್ ಮುಂಬೈ ಇದರ ಅಧ್ಯಕ್ಷರಾದ ಸೂರ್ಯಕಾಂತ್ ಜೆ. ಸುವರ್ಣ ಇವರು ಬಿಡುಗಡೆಗೊಳಿಸಲಿರುವರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಬೆಂಗಳೂರು ಹೈಕೋರ್ಟ್‌ನ ನಿರ್ದೇಶಿತ ಹಿರಿಯ ನ್ಯಾಯವಾದಿಗಳಾದ ಇರುವೈಲ್ ತಾರಾನಾಥ ಪೂಜಾರಿ, ಮಂಗಳೂರು ವಿಕಾಸ ಕಾಲೇಜ್‌ನ ಟ್ರಸ್ಟಿ ಸೂರಜ್ ಕುಮಾರ್ ಕಲ್ಯಾ, ಮೂಡಬಿದರೆ ರತ್ನ ವುಮೆನ್ಸ್ ಕ್ಲಿನಿಕ್‌ನ ಡಾ. ರಮೇಶ್, ಉದ್ಯಮಿ ದಿನೇಶ್ ಅಮೀನ್ ಕುಂದಾಪುರ, ಮೂಡುಬಿದ್ರಿ ಬ್ರಹ್ಮಶ್ರೀ ಗುರುನಾರಾಯಣಸ್ವಾಮಿ ಸೇವಾ ಸಂಘದ ಅಧ್ಯಕ್ಷರಾದ ಸುರೇಶ್ ಕೆ. ಪೂಜಾರಿ, ಉಡುಪಿ ಕೋಟ ಸರಕಾರಿ ಪದವಿ ಪೂರ್ವ ಕಾಲೇಜ್‌ನ ಪ್ರಾಧ್ಯಾಪಕರಾದ ಡಾ। ಸುನಿತಾ ವಿ. ಮೊದಲಾದವರು ಭಾಗವಹಿಸಲಿದ್ದಾರೆ.

ಹಿರಿಯ ಸಹಕಾರಿ, ಕೃಷಿಕ ಹಾಗು ಉದ್ಯಮಿ ಭಾಸ್ಕರ್ ಎಸ್. ಕೋಟ್ಯಾನ್ ಕೊಳಕೆ ಇರ್ವತ್ತೂರು ಇವರಿಗೆ ಯುವವಾಹಿನಿಯ ಪ್ರತಿಷ್ಠಿತ ‘ಸಾಧನ ಶ್ರೀ’ ಪ್ರಶಸ್ತಿ ಪುರಸ್ಕಾರ ನೀಡಲಾಗುವುದು, ಬಿಲ್ಲವ ಸಮಾಜ ಸೇವಾ ಸಂಘ ರಿ ಮುಲ್ಕಿ ಇವರಿಗೆ ‘ಸಾಧನಾ ಶ್ರೇಷ್ಠ’ ಪ್ರಶಸ್ತಿ ಪುರಸ್ಕಾರ ನೀಡಲಾಗುವುದು. ಸಂಗೀತ ಕ್ಷೇತ್ರದ ಸಾಧಕರಾದ ಸಚಿತ್ ಪೂಜಾರಿ ನಂದಳಿಕೆ, ಸಾಂಸ್ಕೃತಿಕ ಜಾನಪದ ಸಂಶೋಧನೆ ಸಂಘಟನೆ ಈ ಕ್ಷೇತ್ರದಲ್ಲಿ ಸಾಧನೆ ಮಾಡಿದ ದಿನೇಶ್ ಸುವರ್ಣ ರಾಯಿ, ಕ್ರೀಡಾ ಕ್ಷೇತ್ರದ ಸಾಧಕರಾದ ಕುಮಾರಿ ರಕ್ಷಾ ರೆಂಜಾಳ, ಸಾಮಾಜಿಕ ಕ್ಷೇತ್ರದ ಸಾಧನೆಗೆ ಕುಮಾರ್ ಪೂಜಾರಿ ಇರುವೈಲ್, ವೈದ್ಯಕೀಯ ಕ್ಷೇತ್ರದ ಸಾಧನೆಗೆ ಡಾ. ಆನಂದ ಬಂಗೇರ ಇವರಿಗೆ ‘ಯುವವಾಹಿನಿ ಗೌರವ ಅಭಿನಂದನೆ’, ಡಾ। ಶಿಲ್ಪಾ ದಿನೇಶ್, ಡಾ| ಉಷಾ ಇವರಿಗೆ ‘ಯುವವಾಹಿನಿ ಅಭಿನಂದನೆ’, ಕುಮಾರಿ ಪ್ರಕೃತಿ ಮಾರುರು ಇವರಿಗೆ ‘ಯುವವಾಹಿನಿ ಸಾಧಕ’ ಪುರಸ್ಕಾರ ನೀಡಿ ಗೌರವಿಸಲಾಗುವುದು.

ಈ ಕಾರ್ಯಕ್ರಮದಲ್ಲಿ ಯುವವಾಹಿನಿ (ರಿ.) ಕೇಂದ್ರ ಸಮಿತಿಯ 35 ಘಟಕಗಳ ಸದಸ್ಯರು ಪ್ರತಿನಿಧಿಗಳಾಗಿ ಮತ್ತು ಇತರ ಬಂಧುಗಳು ಭಾಗವಹಿಸಲಿದ್ದಾರೆ.

‘ವಿದ್ಯೆ-ಉದ್ಯೋಗ-ಸಂಪರ್ಕ’ ಎಂಬ ಧೈಯದೊಂದಿಗೆ ಅವಿಭಜಿತ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ ಅಲ್ಲದೆ ರಾಜ್ಯದ ರಾಜಧಾನಿ ಬೆಂಗಳೂರು ಸೇರಿ ಒಟ್ಟು 35 ಘಟಕಗಳನ್ನು, 4072 ಸಕ್ರಿಯ ಸದಸ್ಯರನ್ನು ಹೊಂದಿದೆ.

ಪತ್ರಿಕಾಗೋಷ್ಠಿಯಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ, ಪ್ರಧಾನ ಕಾರ್ಯದರ್ಶಿ ಜಗದೀಶ್ಚಂದ್ರ ಡಿ.ಕೆ.. ಮೂಡಬಿದ್ರಿ ಘಟಕದ ಅಧ್ಯಕ್ಷರು, ಸಮಾವೇಶದ ಸಂಚಾಲಕರಾದ ಶಂಕರ್ ಎ. ಕೋಟ್ಯಾನ್, ಸಮಾವೇಶ ನಿರ್ದೆಶಕರಾದ ಗಣೇಶ್ ವಿ ಕೋಡಿಕಲ್, ಮೂಡಬಿದ್ರಿ ಘಟಕದ ಕೋಶಾಧಿಕಾರಿ ಪ್ರತಿಭಾ ಸುರೇಶ್, ನೂತನ ಅಧ್ಯಕ್ಷ ಮುರಲೀಧರ್ ಕೋಟ್ಯಾನ್ ಭಾಗವಹಿಸಿದ್ದರು.

 

 

 

 

 

 

 

Related posts

ಮೂಡುವೇಣುಪುರದಲ್ಲಿ ಪಂಡಿತ್ ವೆಂಕಟೇಶ್ ಕುಮಾರ್ ಗೆ ಗೌರವ ಅಭಿನಂದನೆ

Madhyama Bimba

ಆಳ್ವಾಸ್ ನಲ್ಲಿ ದೀಪಾವಳಿ ಸಂಭ್ರಮ, ಸಾಂಪ್ರದಾಯಿಕ ಮೆರುಗು, ಸಾಂಸ್ಕೃತಿಕ ಸೊಬಗು, ಸಿಡಿಮದ್ದಿನ ಬೆರಗು, ಸಾಕ್ಷೀಕರಿಸಿದ 20000 ಕ್ಕೂ ಅಧಿಕ ಜನಸ್ತೋಮ- ಬೆಳಕು ಅಂತರಂಗ ಅರಳಿಸಲಿ, ಸಂಬಂಧವೇ ಸಂಪತ್ತಾಗಲಿ: ಡಾ. ಆಳ್ವ ಆಶಯ

Madhyama Bimba

ಗಾಂಧಿ ಜಯಂತಿ : ಅರಣ್ಯ ಇಲಾಖಾಧಿಕಾರಿಗಳಿಂದ ಸ್ವಚ್ಛತಾ ಕಾರ್ಯ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More