ಕಾರ್ಕಳ

ಕಾರ್ಕಳ: ಅಕ್ರಮ ಮರಳು ವಶ

ಕಾರ್ಕಳ ತಾಲೂಕಿನ ಕಸಬಾ ಗ್ರಾಮದ ಕಾವೇರಡ್ಕ ಬಳಿಯ ಸ್ವರ್ಣ ನದಿಯ ಸರಕಾರಿ ಸ್ಥಳದಲ್ಲಿ ಯಾವುದೇ ಪರವಾನಿಗೆ ಇಲ್ಲದೆ ಅಕ್ರಮ ಮರಳು ತೆಗೆಯುತ್ತಿದ್ದ ವ್ಯಕ್ತಿಗಳನ್ನು ಹಾಗೂ ಲಾರಿಯನ್ನು ಪೊಲೀಸರು ವಶಪಡಿಸಿಕೊಂಡ ಘಟನೆ ಡಿ. 26ರಂದು ನಡೆದಿದೆ.


ಆರೋಪಿತರಾದ ಪ್ರಸಾದ್ ನಾಯಕ್, ಮಂಜು ಹಾಗೂ ಇನ್ನೋರ್ವ ವ್ಯಕ್ತಿ ಸೇರಿಕೊಂಡು ಮರಳನ್ನು ಲಾರಿಗೆ ತುಂಬಿಸುತ್ತಿದ್ದರು. ಖಚಿತ ಮಾಹಿತಿಯ ಮೇರೆಗೆ ಕಾರ್ಕಳ ನಗರ ಪೊಲೀಸ್ ಠಾಣೆಯ ಎಎಸ್‌ಐ ಜಯಂತ್ ದಾಳಿ ಮಾಡಿ ಮರಳುಗಾರಿಕೆಗೆ ಉಪಯೋಗಿಸುತ್ತಿದ್ದ ಟಿಪ್ಪರ್ ಲಾರಿ, ಹಾರೆ, ಪ್ಲಾಸ್ಟಿಕ್ ಬುಟ್ಟಿಯನ್ನು ವಶಪಡಿಸಿಕೊಂಡಿದ್ದಾರೆ.


ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಮುಂದಿನ ದಿನಗಳಲ್ಲಿ ಯಾವುದೇ ಅನಧಿಕೃತ ಬಡಾವಣೆಗಳಿಕೆ ಅವಕಾಶವಿಲ್ಲ – ಉಡುಪಿ ಜಿಲ್ಲಾಧಿಕಾರಿ ಆದೇಶ

Madhyama Bimba

ನೆಲ್ಲಿಕಾರು ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ನಿರ್ದೇಶಕರ ಆಯ್ಕೆ

Madhyama Bimba

ಮೂಡುಬಿದಿರೆ ಅಪೂರ್ವ ಜ್ಯುವೆಲ್ಲರ್‍ಸ್‌ನಲ್ಲಿ ಅಪೂರ್ವ ಸಂಭ್ರಮೋತ್ಸವ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More