ಕಾರ್ಕಳಹೆಬ್ರಿ

ಗಣರಾಜ್ಯೋತ್ಸವದಲ್ಲಿ ಭಾಗಿಯಾಗಲು ಶಿವಪುರದ ಸುಗಂಧಿ ನಾಯ್ಕ್ ಆಯ್ಕೆ

ಹೆಬ್ರಿ : ದೆಹಲಿಯಲ್ಲಿ ಜನವರಿ 26ರಂದು ನಡೆಯುವ ಗಣರಾಜ್ಯೋತ್ಸವದಲ್ಲಿ ಕೃಷಿ ಸಖಿಯಾಗಿ ಭಾಗವಹಿಸಲು ಉಡುಪಿ ಜಿಲ್ಲೆಯ ಹೆಬ್ರಿ ತಾಲ್ಲೂಕಿನ ಶಿವಪುರ ಗ್ರಾಮದ ಮುಳ್ಳುಗುಡ್ಡೆ ಬಳಿಯ ಸುಗಂಧಿ ನಾಯ್ಕ್ ಆಯ್ಕೆಯಾಗಿದ್ದಾರೆ.

ಗಣರಾಜ್ಯೋತ್ಸವದಲ್ಲಿ ಭಾಗವಹಿಸಲು ರಾಜ್ಯದ 12 ಮಂದಿ ಮಹಿಳೆಯರು ಆಯ್ಕೆಯಾಗಿದ್ದು ಸುಗಂಧಿ ನಾಯ್ಕ್ ಸಹಿತ 8 ಮಂದಿ ಮಂದಿ ಕೃಷಿ ಸಖಿ, ಪಶು ಸಖಿ ಹಾಹೂ ಸ್ವಸಹಾಯ ಸಂಘದ ಸದಸ್ಯರು ಮತ್ತು ಸಂಜೀವಿನಿ ಸಂಘದ 4 ಮಂದಿ ಸದಸ್ಯರು ಭಾಗವಹಿಸಲಿದ್ದಾರೆ.


ಸುಗಂಧಿ ನಾಯ್ಕ್ ಶಿವಪುರ ಗ್ರಾಮದ ಶಿವದುರ್ಗೆ ಸಂಜೀವಿನಿ ಒಕ್ಕೂಟದ ಪ್ರಮುಖರಾಗಿದ್ದು ಕೃಷಿಯಲ್ಲಿ ಸಕ್ರೀಯರಾಗಿದ್ದಾರೆ. ಅಡಿಕೆ ಹಾಳೆಯ ತಟ್ಟೆ ತಯಾರಿ ಘಟಕ ನಿರ್ಮಿಸಿ ಸ್ವಾವಲಂಬಿ ಜೀವನಕ್ಕೆ ಮಾದರಿಯಾಗಿದ್ದಾರೆ.

ಶಿವದುರ್ಗೆ ಸಂಜೀವಿನಿ ಒಕ್ಕೂಟವು 30 ಎಕರೆ ಹಡಿಲು ಭೂಮಿಯಲ್ಲಿ ಕೃಷಿ ಮಾಡುವ ಮೂಲಕ ವಿಶಿಷ್ಟ ಸಾಧನೆ ಮಾಡಿದ್ದು ಉಡುಪಿ ಜಿಲ್ಲಾ ಪಂಚಾಯಿತಿ ಸಂಜೀವಿನಿ ಯೋಜನೆಯು ಸಹಕಾರ ನೀಡುತ್ತಿದೆ.

Related posts

ಹೀಟ್ ವೇವ್ ಸ್ಟ್ರೋಕ್‌ನಿಂದ ಕಾರ್ಮಿಕರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಜಿಲ್ಲಾಡಳಿತದಿಂದ ಸಲಹೆ ಸೂಚನೆಗಳು

Madhyama Bimba

ಇಂದು ದಲಿತ ಸಂಘರ್ಷ ಸಮಿತಿಗಳ ಒಕ್ಕೂಟ ವತಿಯಿಂದ ಬೆಂಗಳೂರಿನಲ್ಲಿ ಪ್ರತಿಭಟನೆ

Madhyama Bimba

ಕಾರ್ಕಳದ 03 ಗ್ರಾಮ ಪಂಚಾಯತ್ ಕಟ್ಟಡಗಳ ನಿರ್ಮಾಣಕ್ಕೆ ಅನುದಾನ ಬಿಡುಗಡೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More