ಕಾರ್ಕಳ

ಇರ್ವತ್ತೂರು: ಮಾರಣಾಂತಿಕ ಹಲ್ಲೆ-ಕೇಸು ದಾಖಲು

ಕಾರ್ಕಳ: ಮಾರಣಾಂತಿಕ ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಿದ ಘಟನೆ ಇರ್ವತ್ತೂರು ಗ್ರಾಮ ಪಂಚಾಯತ್ ಸಮೀಪ ಡಿ. 30 ರಂದು ನಡೆದಿದೆ.


ಇರ್ವತ್ತೂರು ಗ್ರಾಮ ಪಂಚಾಯತ್ ಕಟ್ಟಡದ ಪಕ್ಕದಲ್ಲಿರುವ ಕಟ್ಟಡದಲ್ಲಿ ವಿಠಲ, ರೋಹಿತ್, ಸುದರ್ಶನ್, ಹಾಗೂ ಜಯ ಎಂಬವರು ಕಾಂಕ್ರಿಟ್ ಕೆಲಸ ಮಾಡುತ್ತಿದ್ದರು. ಈ ಸಂದರ್ಭ ಅಲ್ಲಿಗೆ ಬಂದ ಭರತ್ ಎಂಬವರು ರೋಹಿತ್ ಇವರೊಂದಿಗೆ ಜಗಳ ಮಾಡುತ್ತಿರುವಾಗ ಇವರನ್ನು ಬಿಡಿಸಲು ಬಂದ ವಿಠಲ ಅವರ ಮೇಲೆ ಹಲ್ಲೆ ಮಾಡಲು ಪ್ರಯತ್ನಿಸಿದ್ದರು.


ಅದರೆ ಇಲ್ಲಿಗೆ ನಿಲ್ಲದ ಜಗಳ ಸಂಜೆ 5.30 ಗಂಟೆಯಿಂದ 06.00 ಗಂಟೆಯ ನಡುವಿನ ಅವಧಿಯಲ್ಲಿ ಭರತ್ ಮತ್ತು ಭವಿಷತ್ ರವರು ಇತರ 10 ಜನರೊಂದಿಗೆ ಬಂದು ಎಕಾಏಕಿ ರಾಡ್ ಹಾಗೂ ಕಟ್ಟಿಗೆಯಿಂದ ಜಯ ಮತ್ತು ಸುದರ್ಶನ್ ರವರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ಕೊಲೆ ಬೆದರಿಕೆ ಹಾಕಿ ಅವಾಚ್ಯ ಶಬ್ದಗಳಿಂದ ಜಾತಿ ನಿಂದನೆ ಮಾಡಿದ್ದರು. ಗಾಯಗೊಂಡ ಸುದರ್ಶನ್ ಮತ್ತು ಜಯ ರವರು ಕಾರ್ಕಳ ತಾಲೂಕು ಸರಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Related posts

ಅರೆಕಾಲಿಕ ಶಿಕ್ಷಕರ ನೇಮಕಾತಿ : ಅರ್ಜಿ ಆಹ್ವಾನ

Madhyama Bimba

10ನೇ ವರ್ಷದ ಸಂಭ್ರಮದಲ್ಲಿ ಕಾರ್ಕಳದ ಶ್ರೀ ವಿಜಯಲಕ್ಷ್ಮೀ ಫ್ಯಾಬ್ರಿಕ್ಸ್-ದೀಪಾವಳಿಯ ಪ್ರಯುಕ್ತ ಲಕ್ಕಿ ಕೂಪನ್, ವಿಶಿಷ್ಟ ಬಹುಮಾನಗಳು

Madhyama Bimba

ಅಂತರಾಷ್ಟ್ರೀಯ ವಿಜ್ಞಾನ ಸಮ್ಮೇಳನಕ್ಕೆ ಆಯ್ಕೆಯಾದ ಹೆಣ್ಣು ಮಕ್ಕಳು ದೇಶದ ನಾರಿ ಶಕ್ತಿಗೆ ಪ್ರೇರಣೆ : ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More