ಕಾರ್ಕಳ

ಅಂತರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್ ಶಿಪ್- ಕಾಂತಾವರದ ಸೃಜನ ಕುಲಾಲ್‌ರಿಗೆ ಚಿನ್ನ ಹಾಗೂ ಬೆಳ್ಳಿಯ ಪದಕ

ಬೈಂದೂರಿನಲ್ಲಿ ಜ. 5ರಂದು ನಡೆದ ಅಂತರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್ ಶಿಪ್‌ನಲ್ಲಿ ಬ್ಲಾಕ್ ಬೆಲ್ಟ್ ವಿಭಾಗದಲ್ಲಿ ಕಾಂತಾವರ ಗ್ರಾಮದ ಬಾರಾಡಿಯ ಸೃಜನ ಕುಲಾಲ್ ಭಾಗವಹಿಸಿ ಕುಮಿಟೆಯಲ್ಲಿ(ಫೈಟಿಂಗ್) ಚಿನ್ನದ ಪದಕ ಹಾಗೂ ಕಟ ವಿಭಾಗದಲ್ಲಿ ಬೆಳ್ಳಿಯ ಪದಕವನ್ನು ಪಡೆದಿರುತ್ತಾರೆ.


ಇವರು ಸರಕಾರಿ ಪದವಿ ಪೂರ್ವ ಕಾಲೇಜು ಸಾಣೂರು ಇಲ್ಲಿ ಪ್ರಥಮ ಪಿಯುಸಿಯ ವಿದ್ಯಾರ್ಥಿನಿಯಾಗಿದ್ದಾರೆ.


ಇವರು ಕಾಂತಾವರ ಗ್ರಾಮದ ಬಾರಾಡಿ ಜಗದೀಶ್ ಕುಲಾಲ್ ಹಾಗೂ ಶ್ರೀಮತಿ ಜ್ಯೋತಿ ಕುಲಾಲ್ ದಂಪತಿಗಳ ಪುತ್ರಿ.

ಇವರಿಗೆ ಕರಾಟೆ ಶಿಕ್ಷಕರಾದ ಸತೀಶ್ ಬೆಳ್ಮಣ್ ಹಾಗೂ ಮೃಣಾಲಿ ಶೆಟ್ಟಿ ಇವರು ತರಬೇತಿ ನೀಡಿರುತ್ತಾರೆ ಅವರ ಸಾಧನೆಗೆ ಕಾಂತಾವರ ಕುಲಾಲ ಸಂಘದಿಂದ ಶುಭಹಾರೈಸಿದ್ದಾರೆ.

Related posts

ಅಂತರಾಜ್ಯ ಕರಾಟೆ ಸ್ಪರ್ಧೆ: ಮುಳ್ಕಾಡು ಈರ್ವರು ಶಾಲಾ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Madhyama Bimba

ಸುಂದರ ಆಚಾರ್ಯ ನಿಧನ

Madhyama Bimba

ಯುವನಿಧಿ: ವಿಶೇಷ ನೋಂದಣಿ ಅಭಿಯಾನ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More