ಕಾರ್ಕಳ

ನೀರೆ ಬೈಲೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ರವೀಂದ್ರ ನಾಯಕ್ ಉಪಾಧ್ಯಕ್ಷರಾಗಿ ಎನ್. ವಿವೇಕಾನಂದ ಶೆಟ್ಟಿ

ಬೈಲೂರು: ನೀರೆ ಬೈಲೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ನೀರೆ ರವೀಂದ್ರ ನಾಯಕ್ ಉಪಾಧ್ಯಕ್ಷರಾಗಿ ಎನ್. ವಿವೇಕಾನಂದ ಶೆಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.


ರವೀಂದ್ರ ನಾಯಕ್ ಈ ಹಿಂದೆ ಸಂಘದಲ್ಲಿ ಎರಡುವರೆ ವರ್ಷ ಅಧ್ಯಕ್ಷರಾಗಿ ಹಾಗೂ ಕಳೆದ ಅವಧಿಯಲ್ಲಿ 5 ವರ್ಷ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದು, ಇದೀಗ ಮತ್ತೊಮ್ಮೆ ಮುಂದಿನ 5 ವರ್ಷದ ಅವಧಿಗೆ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಎನ್. ವಿವೇಕಾನಂದ ಶೆಟ್ಟಿ ಕಳೆದ ಅವಧಿಯಲ್ಲಿ ನಿರ್ದೇಶಕರಾಗಿದ್ದರು. ಇದೀಗ ಮುಂದಿನ 5 ವರ್ಷದ ಅವಧಿಗೆ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.


ಜ. 23ರಂದು ಸಂಘದಲ್ಲಿ ನೂತನ ಪದಾಧಿಕಾರಿಗಳ ಅಯ್ಕೆ ಪ್ರಕ್ರಿಯೆ ನಡೆಯಿತು.


ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ನಿರ್ದೇಶಕರಾದ ವಿನಯ ಕುಮಾರ್ ಶೆಟ್ಟಿ, ಉದಯ ಕುಮಾರ್ ಹೆಗ್ಡೆ, ಶಾಂತರಾಮ್ ಶೆಟ್ಟಿ, ಸುರೇಶ್ ಶೆಟ್ಟಿ, ಕಿಶನ್, ದೇವೇಂದ್ರ ನಾಯಕ್, ಎನ್. ಬಿ. ಬಾಬು, ವಿನೋದ ಪೂಜಾರ್ತಿ, ಶಾಂತ, ಶಂಕರ್ ನಾಯಕ್, ಹಾಗೂ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಪ್ರತಿನಿಧಿ ವಲಯ ಮೇಲ್ವಿಚಾರಕರಾದ ಜಯಂತ್ ಕುಮಾರ್ ಉಪಸ್ಥಿತರಿದ್ದರು.

 

Related posts

ಕಾರ್ಯಾಗಾರ: ನೋಂದಣಿಗೆ ಫೆ. 3 ಕೊನೆ ದಿನ

Madhyama Bimba

ಬೋಳ ಪಿಲಿಯೂರು ಶ್ರೀ ರಾಮಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ

Madhyama Bimba

ಕಾರ್ಕಳ: ರಾಷ್ಟೀಯ ಗ್ರಂಥಾಲಯ ಸಪ್ತಾಹದ ಅಂಗವಾಗಿ ಶಾಲಾ ಮಕ್ಕಳಿಗೆ ವಿವಿಧ ಸ್ಪರ್ಧೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More