ಕಾರ್ಕಳಹೆಬ್ರಿ

ಮಣಿಪಾಲ ಜ್ಞಾನಸುಧಾ: ಉಪನ್ಯಾಸಕರ ಪುನಶ್ಚೇತನಾ ಕಾರ್ಯಾಗಾರ

ಸಮರ್ಥ ಉಪನ್ಯಾಸಕ ವಿದ್ಯಾರ್ಥಿಯ ಜೀವನಕ್ಕೆ ಹೊಸ ಸ್ಪೂರ್ತಿ ತುಂಬುವುದರ ಜೊತೆಗೆ ಸಾಮಾನ್ಯ ವಿದ್ಯಾರ್ಥಿಯನ್ನು ಅಸಾಮಾನ್ಯ ಸಾಧನೆ ಮಾಡುವತ್ತ ಪ್ರೇರೇಪಿಸುತ್ತಾನೆ. ಅಂತಹ ಶಿಕ್ಷಕರು ಸಮಾಜದ ಆಸ್ತಿ ಎಂದು ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಡಾ.ಸುಧಾಕರ ಶೆಟ್ಟಿಯವರು ಅಭಿಪ್ರಾಯ ಪಟ್ಟಿದ್ದಾರೆ.


ಅವರು ಶಾಲಾಶಿಕ್ಷಣ ಇಲಾಖೆ (ಪದವಿ ಪೂರ್ವ) ವತಿಯಿಂದ ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾ ನಗರದಲ್ಲಿ ಆಯೋಜಿಸಿದ ವಿಷಯಾಧಾರಿತ ಉಪನ್ಯಾಸಕರ(ಇತಿಹಾಸ, ವಾಣಿಜ್ಯ ಶಾಸ್ತ್ರ, ರಾಜ್ಯಶಾಸ್ತ್ರ, ಕನ್ನಡ) 2 ದಿನಗಳ ಪುನಶ್ಚೇತನ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.


ಉಡುಪಿ ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ)ಯ ಉಪನಿರ್ದೇಶಕರಾದ ಮಾರುತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಕಾರ್ಯಾಗಾರಕ್ಕೆ ಶುಭ ಹಾರೈಸಿದರು.


ಉಡುಪಿ ಜಿಲ್ಲಾ ಸರಕಾರಿ ಪ.ಪೂ. ಉಡುಪಿ ಜಿಲ್ಲಾ ಉಪನ್ಯಾಸಕರ ಸಂಘದ ಅಧ್ಯಕ್ಷರಾದ ಡಿ.ಕೆ. ಮೊಗೇರ, ಜಿಲ್ಲಾ ಸಂಯೋಜಕರಾದ ವರ್ಗೀಸ್, ವಾಣಿಜ್ಯ ಶಾಸ್ತ್ರ ಜಿಲ್ಲಾ ಸಂಯೋಜಕರಾದ ಶ್ರೀಮತಿ ಚಂದ್ರಕಲಾ, ರಾಜ್ಯಶಾಸ್ತ್ರ ಜಿಲ್ಲಾ ಸಂಯೋಜಕರಾದ ವಾಸು ಮೊಗೇರ, ಇತಿಹಾಸ ವಿಭಾಗದ ಜಿಲ್ಲಾ ಸಂಯೋಜಕರಾದ ಶ್ರೀಮತಿ ಗ್ರೇಸಿ, ಕನ್ನಡ ವಿಭಾಗದ ಜಿಲ್ಲಾ ಸಂಯೋಜಕರಾದ ಉದಯ ಕುಮಾರ್ ಶೆಟ್ಟಿ, ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಗಣೇಶ್ ಶೆಟ್ಟಿ ಉಪಸ್ಥಿತರಿದ್ದರು.

ಉಡುಪಿ ಜಿಲ್ಲಾ ಅನುದಾನಿತ ಹಾಗೂ ಅನುದಾನರಹಿತ ಪ.ಪೂ. ಕಾಲೇಜುಗಳ ಪ್ರಾಂಶುಪಾಲರ ಸಂಘದ ಅಧ್ಯಕ್ಷರಾದ ದಿನೇಶ್ ಎಂ ಕೊಡವೂರು ಸ್ವಾಗತಿಸಿದರು. ಆಂಗ್ಲಭಾಷಾ ಉಪನ್ಯಾಸಕಿ ಶ್ರೀಮತಿ ಶಮಿತಾ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Related posts

ಕಾರ್ಕಳ ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಮಗಳಿಗೆ ಸ್ಥಾನೀಯ ಸಮಿತಿಗೆ ಅಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿ ಆಯ್ಕೆ

Madhyama Bimba

ಡಾ. ಎಂ. ವೀರಪ್ಪ ಮೊಯಿಲಿಯವರಿಗೆ ರಾಜ್ಯೋತ್ಸವ ಪ್ರಶಸ್ತಿ

Madhyama Bimba

ಬೆಳ್ಮಣ್ ಸಂತ ಜೋಸೆಫ್ ಆಂಗ್ಲ ಮಾಧ್ಯಮ ಶಾಲೆಯಲ್ಲಿಎನ್ ಎಸ್ ಎಸ್ ವಾರ್ಷಿಕ ಶಿಬಿರದ ಉದ್ಘಾಟನೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More