ಕಾರ್ಕಳ

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕುಜೆ- ನಿವೃತ್ತಿ ಹೊಂದಿದ ಅಡುಗೆ ಸಹಾಯಕಿ ಶ್ರೀಮತಿ ಮಾಲತಿ ಭಂಡಾರಿಯವರಿಗೆ ಬೀಳ್ಕೊಡುಗೆ

ಕುಕ್ಕುಜೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಿರಿಯ ಅಡುಗೆ ಸಹಾಯಕಿಯಾಗಿ ಸೇವೆ ಸಲ್ಲಿಸಿ ನಿವೃತ್ತಿಯಾದ ಶ್ರೀಮತಿ ಮಾಲತಿ ಭಂಡಾರಿ ಅವರಿಗೆ ಸನ್ಮಾನ ಮಾಡಿ ಬೀಳ್ಕೊಡುವ ಕಾರ್ಯಕ್ರಮ ಜ. 30ರಂದು ನಡೆಯಿತು.


ಎಸ್. ಡಿ. ಯಂ. ಸಿ. ಅಧ್ಯಕ್ಷರ ಹಾಗೂ ಸದಸ್ಯರ ನೇತೃತ್ವದಲ್ಲಿ ಮತ್ತು ಹಳೇವಿದ್ಯಾರ್ಥಿ ಸಂಘ, ಮತ್ತು ಗಣೇಶೋತ್ಸವ ಸಮಿತಿಯ ಸಹ ಭಾಗಿತ್ವ ದಲ್ಲಿ ಕಾರ್ಯಕ್ರಮ ನಡೆಯಿತು.


ಇವರು ಸುಮಾರು 22 ವರ್ಷ ಮುಖ್ಯ ಅಡುಗೆಯವರಾಗಿ ಸೇವೆ ಸಲ್ಲಿಸುತ್ತಿದ್ದರು.
ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ರವೀಂದ್ರ ನಾಯ್ಕರವರು ಅಧ್ಯಕ್ಷತೆ ವಹಿಸಿದ್ದರು.


ಶ್ರೀಮತಿ ಯಶೋದಾ ಹೆಗ್ಡೆ ಮತ್ತು ಮುಖ್ಯೋಪಾಧ್ಯಾಯರಾದ ದಯಾನಂದ ನಾಯಕ್ ಮಾತನಾಡಿ ನಿವೃತ್ತಿ ಜೀವನಕ್ಕೆ ಶುಭ ಹಾರೈಸಿದರು.

ವೇದಿಕೆಯಲ್ಲಿ ಕಡ್ತಲ ಗ್ರಾಮ ಪಂಚಾಯತಿಯ ಸದಸ್ಯರಾದ ದೀಕ್ಷಿತ್ ಶೆಟ್ಟಿ ಹಾಗೂ ಶ್ರೀಮತಿ ರೇಖಾ, ಸಾರ್ವಜನಿಕ ಗಣೇಶೋತ್ಸವ ಸಮಿತಿ ದೊಂಡೆರಂಗಡಿ ಇದರ ಅಧ್ಯಕ್ಷರಾದ ಅಖಿಲೇಶ್ ಶೆಟ್ಟಿ ಉಪಸ್ಥಿತರಿದ್ದರು.

ಶಾಲೆಯ ಮುಖ್ಯೋಪಾಧ್ಯಾಯರಾದ ಬಿ.ದಯಾನಂದ ನಾಯಕ್ ಸ್ವಾಗತಿಸಿದರು. ಸಹ ಶಿಕ್ಷಕರಾದ ರಾಮ ಧನ್ಯವಾದ ಸಮರ್ಪಿಸಿದರು. ಶ್ರೀಮತಿ ರಂಜಿತಾ ಕಾರ್ಯಕ್ರಮ ನಿರೂಪಿಸಿದರು.
ಶಾಲೆಯ ಶಾಲಾಭಿವೃದ್ಧಿ ಸಮಿತಿಯ ಸದಸ್ಯರು, ಶಾಲಾ ಶಿಕ್ಷಕರ ವೃಂದದವರು ಈ ಸಂದರ್ಭದಲ್ಲಿದ್ದರು.

Related posts

ಮುಂಡ್ಕೂರು: ಜೀವನದಲ್ಲಿ ಜಿಗುಪ್ಸೆ- ಆತ್ಮಹತ್ಯೆ

Madhyama Bimba

ಫೆ. 14: ಕುಕ್ಕುಂದೂರು ಗ್ರಾಮ ಪಂಚಾಯತ್ ಗ್ರಾಮಸಭೆ

Madhyama Bimba

ರಿಷಿಕಾ ಕುಂದೇಶ್ವರಗೆ ಸಿಎಂ ಮೆಚ್ಚುಗೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More