ಕಾರ್ಕಳ

ಬೈಲೂರು ಮಹಾಶಕ್ತಿ ಕೇಂದ್ರದ ಬೂತ್ ಪ್ರಮುಖರ ಸಭೆ

ಕಾರ್ಕಳ: ಈ ಹಿಂದೆ ಕಾರ್ಕಳದ ಜನರಿಗೆ ಏಕವಿನ್ಯಾಸ ನಕ್ಷೆಗೆ ಪಂಚಾಯತ್‌ನಲ್ಲಿ 2000 ರೂಪಾಯಿಗೆ ಆಗುತ್ತಿದ್ದ ಕೆಲಸ ಇದೀಗ ಕಾಪು ಪ್ರಾಧಿಕಾರಕ್ಕೆ ಹೋಗಿ 20,000 ಖರ್ಚುಮಾಡುವ ಹಾಗೆ ಆಗಿದೆ. ಮನೆ ಕಟ್ಟುವವರು ಹತ್ತಾರು ಬಾರಿ ಕಾಪು ಪ್ರಾಧಿಕಾರಕ್ಕೆ ಅಲೆದಾಡುವ ಪರಿಸ್ಥಿತಿ ಬಂದರೂ ಪರವಾನಿಗೆ ಸಿಗುತ್ತಿಲ್ಲ. ಇದರಿಂದ ಜನರಿಗಾಗುವ ಸಮಸ್ಯೆಗಳ ಕುರಿತು ದಿನಪತ್ರಿಕೆಗಳು ಸಮಗ್ರವಾಗಿ ವರದಿ ಮಾಡಿವೆ ಎಂದು ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ನಿಕಟಪೂರ್ವ ಅಧ್ಯಕ್ಷರಾದ ಬಿ.ಮಣಿರಾಜ ಶೆಟ್ಟಿ ಹೇಳಿದರು.


ಬೈಲೂರು ಮಾರಿಯಮ್ಮ ಸಭಾಭವನದಲ್ಲಿ ನಡೆದ ಬೈಲೂರು ಮಹಾಶಕ್ತಿ ಕೇಂದ್ರದ ಬೂತ್ ಅಧ್ಯಕ್ಷರು-ಜನಪ್ರತಿನಿಧಿಗಳು ಮತ್ತು ಪಕ್ಷದ ಪ್ರಮುಖರ ಸಭೆಯಲ್ಲಿ ಅವರು ಮಾತನಾಡುತ್ತಾ ಕಾಂಗ್ರೆಸ್ ಆಡಳಿತದಲ್ಲಿ ಜನಸಾಮಾನ್ಯರ ದೈನಂದಿನ ಚಟುವಟಿಕೆಗಳಿಗೆ ತೀರಾ ತೊಂದರೆಯಾಗುತ್ತಿದ್ದು ಅಭಿವೃದ್ಧಿ ಶೂನ್ಯವಾಗಿದೆ.

ಹಿಂದೆ ಬಿಜೆಪಿ ಸರ್ಕಾರ ಇರುವಾಗ ಲೆಕ್ಕವಿಲ್ಲದಷ್ಟು ರಸ್ತೆಗಳು, ಸೇತುವೆಗಳು ಮಂಜೂರಾಗಿದ್ದು ಈ ಬಾರಿ ಕನಿಷ್ಠ ತೀರಾ ಅಗತ್ಯದ ಕೆಲಸಗಳಿಗೂ ಅನುದಾನ ದೊರೆಯುತ್ತಿಲ್ಲ. ಈ ಬಗ್ಗೆ ಕಾಂಗ್ರೆಸ್‌ನ ಕೆಲವು ಶಾಸಕರೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸರಕಾರವು ಅಧಿಕಾರಿಗಳ ಜನರನ್ನು ಸುಲಿಗೆ ಮಾಡುತ್ತಿದೆ. ಇದೊಂದು ಪಿಕ್ ಪಾಕೆಟ್ ಸರಕಾರ ಎಂಬುದಾಗಿ ಸಾಬೀತಾಗಿದೆ ಎಂದು ಕಾಂಗ್ರೆಸ್ ಸರಕಾರವನ್ನು ಟೀಕಿಸಿದರು.

ಈ ಸಂದರ್ಭದಲ್ಲಿ ಕ್ಷೇತ್ರದ ಶಾಸಕರಾದ ವಿ. ಸುನಿಲ್ ಕುಮಾರ್, ಕ್ಷೇತ ಅಧ್ಯಕ್ಷರಾದ ನವೀನ್ ನಾಯಕ್, ಜಿಲ್ಲಾಉಪಾಧ್ಯಕ್ಷರಾದ ಮಹಾವೀರ ಹೆಗ್ಡೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ, ಪ್ರಧಾನ ಕಾರ್ಯದರ್ಶಿಯಾದ ಬೋಳ ಸತೀಶ್ ಪೂಜಾರಿ, ಶಕ್ತಿ ಕೇಂದ್ರ ಅಧ್ಯಕ್ಷರಾದ ಸಂದೀಪ್ ಅಮೀನ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Related posts

ಕಾರ್ಕಳ ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಮಗಳಿಗೆ ಸ್ಥಾನೀಯ ಸಮಿತಿಗೆ ಅಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿ ಆಯ್ಕೆ

Madhyama Bimba

ವಿದ್ಯಾಗಿರಿಯಲ್ಲಿ ಶಾಸಕರಿಂದ ಸರಕಾರಿ ಬಸ್ ಗೆ ಹಸಿರು ನಿಶಾನೆ

Madhyama Bimba

ತೋಟಗಾರಿಕೆ ಕ್ಷೇತ್ರದಲಿ ಇಲಾಖಾ ದರದಲ್ಲಿ ತೋಟಗಾರಿಕೆ ಸಸಿಗಳು ಲಭ್ಯ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More