ಮೂಡುಬಿದಿರೆ

ಹೆದ್ದಾರಿ ಪ್ರಾಧಿಕಾರ ಅಧಿಕಾರಿಗಳಿಂದ ಖಾಸಗಿ ಜಮೀನು ವಶಕ್ಕೆ ಹುನ್ನಾರ

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕಾರ್ಕಳದಿಂದ ಮಂಗಳೂರುವರೆಗೆ ನಡೆಸುತ್ತಿರುವ ಚತುಷ್ಪಥ ರಸ್ತೆ ಕಾಮಗಾರಿಯನ್ನು ಕಾನೂನು ರೀತಿಯಲ್ಲಿ ನಡೆಸದೆ ಕಿರುಕುಳ ನೀಡುತ್ತಿರುವುದಾಗಿ ಮೂಡುಬಿದಿರೆ ಅಲಂಗಾರು ಉಳಿಯದ ಭದ್ರ ಸಾ ಮಿಲ್‌ನ ಆಡಳಿತದಾರರು ಅಬ್ದುಲ್ ಖಾದರ್, ಮಹಮ್ಮದ್ ಹನೀಫ್ ಹಾಗೂ ಸ್ಥಳೀಯರಾದ ವಿಶ್ವಮೂರ್ತಿ ಆಚಾರ್ಯ ಆರೋಪಿಸಿದ್ದಾರೆ.


ಮೂಡುಬಿದಿರೆ ಪ್ರೆಸ್ ಕ್ಲಬ್‌ನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ಸ್ವಾಧೀನವಾಗಿರುವ ಸರ್ವೇ ನಂಬ್ರ 204, 206, 207, 240/2ಎ ಜಮೀನುಗಳನ್ನು ಬಳಸಿಕೊಳ್ಳದೆ ಹೆದ್ದಾರಿ ವ್ಯಾಪ್ತಿಗೆ ಬರದ ಭದ್ರ ಸಾ ಮಿಲ್ ಹಾಗೂ ಸ್ಥಳೀಯ ಓರ್ವರ ಮನೆಯ ಜಾಗವನ್ನು ಅತಿಕ್ರಮಿಸಲು ಹುನ್ನಾರ ನಡೆಸುತ್ತಿರುವ ಬಗ್ಗೆ ದೂರಿದರು.

ಈ ಬಗ್ಗೆ ನಾವು ಕಾನೂನು ಹೋರಾಟ ನಡೆಸಿದರೂ ಪ್ರಯೋಜನವಾಗಿಲ್ಲ ಎಂದು ಆತಂಕ ವ್ಯಕ್ತ ಪಡಿಸಿದರು. ಅಧಿಕಾರಿಗಳು ಈ ಮೂಲಕ ಕಮಿಷನ್ ದಂಧೆ ನಡೆಸುವ ಬಗ್ಗೆಯೂ ಗುಮಾನಿ ವ್ಯಕ್ತ ಪಡಿಸಿದರು.

Related posts

ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿ ಲಿ. ಮಂಗಳೂರಿಗೆ ಪ್ರತಿಷ್ಠಿತ “ಸಹಕಾರ ಮಾಣಿಕ್ಯ” ಪ್ರಶಸ್ತಿ

Madhyama Bimba

ಅಳಿಯೂರಿನಲ್ಲಿ ವಿದ್ಯಾಗಣಪತಿ ಪಟಾಕಿ ಮಳಿಗೆ ಪ್ರಾರಂಭ

Madhyama Bimba

ಪೊಲೀಸ್ ಪ್ರಕಟಣೆ 

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More